26/06/2025
ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕರ್ಷ್ ಅಭಿಯಾನ
ತಾಲ್ಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ನವದೆಹಲಿ ಇವರಿಂದ 150 ನೇ ಜನಗಣತಿಯ ಗೌರವ ವರ್ಷ ಆಚರಣೆ ಸಂಬಂಧ *ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕರ್ಷ್ ಅಭಿಯಾನ* ಯೋಜನೆಯಡಿ ಬುಡಕಟ್ಟು ಸಮುದಾಯ ಪ್ರದೇಶದಲ್ಲಿ ಹೆಚ್ಚಾಗಿ ವಾಸಿಸುತ್ತಿರುವ ಗ್ರಾಮಗಳಲ್ಲಿ ಸಾಮಾಜಿಕ ಶೈಕ್ಷಣಿಕ ಸ್ಥಿತಿಗತಿಗಳನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸಿಕೊಳ್ಳಲು ಮತ್ತು ಕನಿಷ್ಟ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಒಂದು ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆ ಯಾಗಿದ್ದು, ಈ ಯೋಜನೆಗೆ ಕೊಪ್ಪ ತಾಲ್ಲೂಕಿನಲ್ಲಿ ಗುಡ್ಡೆ ತೋಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗೂರು ಗ್ರಾಮವು ಆಯ್ಕೆಯಾಗಿದ್ದು ಇಂದು ಸದರಿ ಗ್ರಾಮದಲ್ಲಿ *ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕರ್ಷ್ ಎಂಬ ಅಭಿಯಾನ* ಯನ್ನು ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಸಭಾಂಗಣದಲ್ಲಿ ಹಮ್ಮಿಕೊಂಡು ಮೇಗೂರು ಗ್ರಾಮದ ಬುಡಕಟ್ಟು ಸಮುದಾಯದವರಿಗೆ ಕೊರತೆ ಇರುವ ಆಧಾರ್ ಕಾರ್ಡ್ ,ಆಯುಷ್ಮಾನ್ ಕಾರ್ಡ್ , ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ, ಜಾತಿ ಪ್ರಮಾಣ ಪತ್ರ, ನಿವಾಸ ಪ್ರಮಾಣ ಪತ್ರ, ಸಾಮಾಜಿಕ ಭಧ್ರತೆ ಯೋಜನೆಗಳಾದ ವೃಧ್ಯಾಪ್ಯ ವೇತನ , ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತ್ರಿ ಯೋಜನೆ, ಪಿಎಂ ಮಾತೃ ವಂಧನ ಯೋಜನೆ ಹಾಗೂ ರೇಷನ್ ಕಾರ್ಡ್ ಸೌಲಭ್ಯಗಳನ್ನು ಇತ್ಯಾದಿ ಸೌಲಭ್ಯಗಳನ್ನು ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿ ಸೂಕ್ತ ದಾಖಲೆಯನ್ನು ಪರೀಶೀಲಿಸಿ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಒದಗಿಸಲಾಯಿತು.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಇಲ್ಲದೇ ಇರುವ ಕುಟುಂಬಗಳಿಗೆ ಸ್ಥಳದಲ್ಲಿ ಉದ್ಯೋಗ ಚೀಟಿ ಹಾಗೂ ಕಾಮಗಾರಿ ಆದೇಶ ಪತ್ರ ನೀಡಲಾಯಿತು.ಹಾಗೂ ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು,ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.